‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

ಮಂಗಳೂರು/ದೆಹಲಿ: ಹೊಸ ಕ್ರಿಮಿನಲ್ ಕಾನೂನುಗಳು ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ(ಜು.01) ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು 77 ವರ್ಷಗಳ ನಂತರ, ಅಪರಾಧ ನ್ಯಾಯ ವ್ಯವಸ್ಥೆಯು ಈಗ ಸಂಪೂರ್ಣವಾಗಿ ‘ಸ್ವದೇಶಿ’ ಆಗಿದ್ದು, ಭಾರತೀಯ ಮೌಲ್ಯಗಳ ಮೇಲೆ ಕಾರ್ಯನಿರ್ವಹಿಸುತ್ತಿದೆ. 75 ವರ್ಷಗಳ ನಂತರ ವಸಾಹತುಶಾಹಿ ಕಾನೂನುಗಳನ್ನು ಭಾರತೀಯ ಸಂಸತ್ತು ಜಾರಿಗೆ ತಂದ ಹೊಸ ಕಾನೂನುಗಳೊಂದಿಗೆ ಜು.1 ರ ಸೋಮವಾರದಿಂದ ಜಾರಿಗೆ ಬಂದಿದೆ ಎಂದು ಅವರು ಒತ್ತಿ ಹೇಳಿದರು.

“ದಂಡ” ಬದಲಿಗೆ, ಅದು ಈಗ “ನ್ಯಾಯ” ಆಗಿದೆ. ವಿಳಂಬದ ಬದಲಿಗೆ, ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ಇರುತ್ತದೆ, ಮೊದಲು, ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗಿದೆ. ಆದರೆ ಈಗ, ಸಂತ್ರಸ್ತರು ಮತ್ತು ದೂರುದಾರರ ಹಕ್ಕುಗಳನ್ನು ಸಹ ರಕ್ಷಿಸಲಾಗುತ್ತದೆ.  ಎಂದು ಶಾ ಹೇಳಿದ್ದಾರೆ. ಹೊಸ ದೃಷ್ಟಿಕೋನವನ್ನು ಪ್ರತಿಬಿಂಬಿಸುವ ಮೂರು ಹೊಸ ಕಾನೂನುಗಳು ಮಧ್ಯರಾತ್ರಿಯಿಂದ ಜಾರಿಗೆ ಬಂದಿವೆ. ಈಗ, ಭಾರತೀಯ ದಂಡ ಸಂಹಿತೆ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಇರುತ್ತದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಇರುತ್ತದೆ. ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ್ ಇರುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಅಪರಾಧಗಳ ಕುರಿತು ಮಾತನಾಡಿದ ಶಾ, ಹೊಸ ಕಾನೂನು ಸಂತ್ರಸ್ತರ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ಒದಗಿಸುತ್ತದೆ, ಸಾಮಾಜಿಕ ನಿಂದೆಯಿಂದ ಅವಳನ್ನು ರಕ್ಷಿಸುವ ಆನ್‌ಲೈನ್ ಎಫ್‌ಐಆರ್ ಸೌಲಭ್ಯದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ. ಗುಂಪು ಹತ್ಯೆ ಪ್ರಕರಣಕ್ಕೆ ಕಾನೂನಿನಲ್ಲಿ ಅವಕಾಶವಿರಲಿಲ್ಲ. ಅದನ್ನು ಈಗ ವ್ಯಾಖ್ಯಾನಿಸಲಾಗಿದೆ. ಇದು ಬಹುಕಾಲದ ಬೇಡಿಕೆಯಾಗಿತ್ತು. ಅಲ್ಲದೆ ದೇಶದ್ರೋಹದ ಸೆಕ್ಷನ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಿ ದೇಶ ವಿರೋಧಿ ಚಟುವಟಿಕೆಗಳಿಗೆ ಹೊಸ ಸೆಕ್ಷನ್ ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧ. ಈಗ, ಭಾರತದ ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ವಿಭಾಗಗಳು ಮತ್ತು ಅಧ್ಯಾಯಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ಅಧ್ಯಾಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. 35 ವಿಭಾಗಗಳು ಮತ್ತು 13 ನಿಬಂಧನೆಗಳೊಂದಿಗೆ ಸಂಪೂರ್ಣ ಅಧ್ಯಾಯವನ್ನು ಸೇರಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕರ ಅತ್ಯಾಚಾರಕ್ಕೆ ಮರಣದಂಡನೆ. ಒಬ್ಬರ ಗುರುತನ್ನು ಮರೆಮಾಚುವ ಮೂಲಕ ಅಥವಾ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಲೈಂಗಿಕ ಶೋಷಣೆಗಾಗಿ ಪ್ರತ್ಯೇಕ ಅಪರಾಧವನ್ನು ವ್ಯಾಖ್ಯಾನಿಸಲಾಗಿದೆ ಎಂದ ಅವರು ಮುಂದಿನ ಐವತ್ತು ವರ್ಷಗಳನ್ನು ಪರಿಗಣಿಸಿ ಭವಿಷ್ಯದ ತಾಂತ್ರಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನುಗಳನ್ನು ವಿನ್ಯಾಸಗೊಳಿಸಲಾಗಿದೆ. 99.9 ರಷ್ಟು ಪೊಲೀಸ್ ಠಾಣೆಗಳು ಈಗ ಗಣಕೀಕರಣಗೊಂಡಿವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here