ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ – 9 ಸಾವು

ಮಂಗಳೂರು(ರಾಜಸ್ಥಾನ): ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರೌಲಿ ಮತ್ತು ಮಂದರಯಾಲ್​​ ರಸ್ತೆಯ ದುಂಡಾಪುರ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕರೌಲಿ ಜಿಲ್ಲಿಯ ಕಿಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಬೊಲೊರೊ ವಾಹನಕ್ಕೆ ಟ್ರಕ್​ ಡಿಕ್ಕಿ ಹೊಡೆದಿದೆ. ಬೊಲೊರೊದಲ್ಲಿದ್ದ 13 ಜನರ ಪೈಕಿ 9 ಜನರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಕೆಲವರು ಮಧ್ಯಪ್ರದೇಶದ ಶಿಯೋಪುರ್​ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಇನ್ನಿತರರು ರಾಜಸ್ಥಾನ್​​ ಕರೌಲಿಯ ಮುಂಡ್ರಾಯಲ್​​ ಖಿರ್ಕನ್​ ಗ್ರಾಮದವರು ಎಂದು ತಿಳಿದುಬಂದಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here