ಎಮ್ಮೆಕೆರೆ ಸ್ಮಾರ್ಟ್ ಸಿಟಿ ಈಜು ಕೊಳದಲ್ಲಿ‌ ಈಜಾಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ನಗರದ ಎಮ್ಮೆಕೆರೆ ಬಳಿಯ ಅಂತರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಈಜಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಮಂಗಳೂರಿನ ಎಮ್ಮೆಕೆರೆ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾಗಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಬೆಳ್ಳಂ ಬೆಳಗ್ಗೆ ಈಜಾಡಿ ಕಸರತ್ತು ಮಾಡಿದ್ದಾರೆ. ಈ ಹಿಂದೆ ಈಜುಕೊಳ ಉದ್ಘಾಟನಾ ಸಂದರ್ಭದಲ್ಲಿ ಬರಲು ಆಗದೇ ಇರುವ ಕಾರಣ ಮುಂದೆ ಇಲ್ಲಿಯೇ ಈಜಾಡಲು ಬರುವುದಾಗಿ ತಿಳಿಸಿದ್ದರು. ಹಾಗಾಗಿ ಇಂದು ಈಜುಕೊಳಕ್ಜೆ ಬೇಟಿ ನೀಡಿದ್ದರು. ಮಾತ್ರವಲ್ಲದೆ ಇಲ್ಲಿನ ಲಾಕರ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದು, ಸ್ಮಾರ್ಟ್ ಸಿಟಿಯ ಅಧಿಕಾರಿಗಳಿಗೆ ಆದೇಶ ನೀಡಿದರು.

LEAVE A REPLY

Please enter your comment!
Please enter your name here