ಮಾರಿಪಳ್ಳ ಬಳಿ ಬಸ್ ಢಿಕ್ಕಿ – ಬೆಂಜನಪದವು ನಿವಾಸಿ ಬೈಕ್ ಸವಾರ ಮೃತ್ಯು

ಮಂಗಳೂರು/ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ‌ ಸವಾರ ಮೃತಪಟ್ಟ ಘಟನೆ ಜು.7ರ ರಾತ್ರಿ ನಡೆದಿದೆ.

ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕನಾಗಿದ್ದಾನೆ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಬಸ್ ದ್ವಿಚಕ್ರ ವಾಹನ‌ಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here