ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ – ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

ಮಂಗಳೂರು/ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು(ಶುಕ್ರವಾರ) ವಶಕ್ಕೆ ಪಡೆದಿದ್ದಾರೆ.

ಬುಧವಾರ(ಜು.10) ಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಎಂಬುವವರನ್ನು ವಶಕ್ಕೆ ಪಡೆದುಕೊಂಡ ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿಗಳ ಆಧಾರದ ಮೇಲೆ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here