ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್ – ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ – ಸಿಎಂ

ಮಂಗಳೂರು/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಜು.15ರಂದು ನಡೆದ ಸಚಿವ ಸಂಪುಟದಲ್ಲಿ ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆ.1ರಿಂದಲೇ ಜಾರಿಗೆ ಬರಲಿದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜು. 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ. ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು.

LEAVE A REPLY

Please enter your comment!
Please enter your name here