ಕಾಲು ಜಾರಿ ಬಿದ್ದ ಮಾಜಿ ಸಚಿವ ಹೆಚ್‍.ಡಿ.ರೇವಣ್ಣ – ಪಕ್ಕೆಲುಬಿಗೆ ಏಟು ಆಸ್ಪತ್ರೆಗೆ ದಾಖಲು

ಮಂಗಳೂರು/ಹಾಸನ: ಆಷಾಡ ಏಕಾದಶಿ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಾಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಇದೀಗ ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಷಾಡ ಏಕಾದಶಿ ಪ್ರಯುಕ್ತ ರೇವಣ್ಣ ಅವರು ಉಪವಾಸವಿದ್ದರು ಎನ್ನಲಾಗುತ್ತಿದೆ. 

LEAVE A REPLY

Please enter your comment!
Please enter your name here