ಆರ್ಥಿಕ ಸಮಸ್ಯೆಯಿಂದ ಒತ್ತಡ – ವಾಟರ್‌ ಟ್ಯಾಂಕ್‌ ಮೇಲಿನಿಂದ ಕೆಳಕ್ಕೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು/ಪಂಜಾಬ್: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ತನ್ನ ಹೆತ್ತವರಿಗೆ ಏಕೈಕ ಮಗನಾಗಿರುವ ಈತ ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ಎನ್ನಲಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದ್ದನು ಎಂದು ತಿಳಿದುಬಂದಿದೆ. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here