ವಿಧಾನಸೌಧದ ಗುಮ್ಮಟದಲ್ಲಿ ಕಾಣಿಸಿಕೊಂಡ ಬಿರುಕು – ಯು.ಟಿ ಖಾದರ್ ಪರಿಶೀಲನೆ

ಮಂಗಳೂರು/ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ, ಶಕ್ತಿಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಸಣ್ಣ ಬಿರುಕು ಮೂಡಿದ್ದು, ಸ್ಪೀಕರ್ ಯು.ಟಿ ಖಾದರ್ ಇಂದು ಪರಿಶೀಲನೆ ನಡೆಸಿದ್ದಾರೆ.

ಬಿರುಕು ಕಾಣಿಸಿಕೊಂಡಿರುವ ಮಾಹಿತಿ ತಿಳಿದ ಕೂಡಲೇ ಸ್ಪೀಕರ್‌ ಯು.ಟಿ ಖಾದರ್ ಅವರು ಗುಮ್ಮಟದ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಹಿತಿ ನೀಡಿದ ಅವರು ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಈ ವಿಷಯವನ್ನು ಸಿಎಂ ಗಮನಕ್ಕೆ ನಾನು ತರ್ತಿನಿ ಎಂದು ಹೇಳಿದ್ದಾರೆ.

ಐತಿಹಾಸಿಕ ವಿಧಾನಸೌಧ ಇದೊಂದು ಬಹಳ ವರ್ಷದ ಹಳೆಯ ಕಟ್ಟಡ. ಇದು ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರಿಗೆ ಬರುತ್ತದೆ. ಬಿರುಕು ಕಾಣಿಸಿಕೊಂಡಿದ್ದನ್ನು ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ನಾನು ಆದಷ್ಟು ಬೇಗ ಸಿಎಂಗೆ ಈ ವಿಚಾರ ತಿಳಿಸುತ್ತೇನೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. 

LEAVE A REPLY

Please enter your comment!
Please enter your name here