ಮೋದಿ ದೇವಾಲಯ ನಿರ್ಮಿಸಿದ ಭಕ್ತ – ಅಭಿಮಾನ ಮೆರೆದ ಅನ್ನದಾತನಿಂದ ಪ್ರತಿನಿತ್ಯ ಪೂಜೆ

ಮಂಗಳೂರು/ತಿರುಚ್ಚಿ: ತಮಿಳುನಾಡಿನಲ್ಲಿ ರೈತರೊಬ್ಬರು ತಮ್ಮ ಸ್ವಂತ ಹಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನ ಕಟ್ಟಿ ವಿಶೇಷ ಅಭಿಮಾನ ಮೆರೆದಿದ್ದಾರೆ.

ತಿರುಚ್ಚಿ ಬಳಿಯ ಸಾತನೂರಿನ ರೈತ ಶಂಕರ್ ಪ್ರಧಾನಿ ನರೇಂದ್ರ ಮೋದಿಗೆ ಗೌರವ ಸಲ್ಲಿಸಲು ದೇವಾಲಯ ನಿರ್ಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ತಮ್ಮ ಸ್ವಂತ ದುಡಿಮೆಯ ಹಣ ಖರ್ಚು ಮಾಡಿ ದೇವಾಲಯ ನಿರ್ಮಿಸಿದ್ದಾರೆ. ತಿರುಚ್ಚಿ ಜಿಲ್ಲೆಯ ತರಿಯೌರ್ ಪ್ರದೇಶದ ಎರಕುಡಿ ಗ್ರಾಮದವರಾದ ರೈತ ಶಂಕರ್ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಕೃಷಿ ಮಾಡಲು ತಮ್ಮ ಊರಿಗೆ ಮರಳಿದ್ದರು. ಪ್ರಧಾನಿ ಮೋದಿಯವರ ವಿವಿಧ ಯೋಜನೆಗಳಿಂದ ಪ್ರೇರಿತರಾದ ಶಂಕರ್ ಅವರನ್ನು ಗೌರವಿಸಲು ನಿರ್ಧರಿಸಿ, ದೇವಸ್ಥಾನ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

LEAVE A REPLY

Please enter your comment!
Please enter your name here