ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ  ತಿರಂಗಾ ಯಾತ್ರೆ

ಮಂಗಳೂರು : ಪಾಕಿಸ್ತಾನದ ವಿರುದ್ದ ಕಾರ್ಗಿಲ್ ಯುದ್ಧದಲ್ಲಿ ಜಯಸಾಧಿಸಿ 25 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಜು.26ರಂದು ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ  ತಿರಂಗಾ ಯಾತ್ರೆ ನಡೆಯಿತು.

1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಸ್ಮರಿಸುವ ದಿನದ  ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ತಿರಂಗಾ ಯಾತ್ರೆಯನ್ನು ಹಮ್ಮಿಕೊಂಡಿತ್ತು. ಸುಮಾರು 75 ಮೀಟರ್ ಉದ್ದದ ಭಾರತದ ಧ್ವಜವನ್ನು ಬಿಜೆಪಿ ಕಾರ್ಯಕರ್ತರು ಬಂಟ್ಸ್ ಹಾಸ್ಟೆಲ್ ಸರ್ಕಲ್‌ನಿಂದ ಪಿವಿಎಸ್ ತಿರಂಗಾ ಯಾತ್ರೆ ನಡೆಸಿದರು.ಬಳಿಕ ಬಿಜೆಪಿ ಕಚೇರಿಯಲ್ಲಿ ನಡೆದ ವೀರ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here