ಶಿರೂರು ಗುಡ್ಡ ಕುಸಿತ ಪ್ರಕರಣ – ನಾಪತ್ತೆಯಾದ ಚಾಲಕ ಅರ್ಜುನ್ ಹುಡುಕಾಟಕ್ಕೆ ಈಶ್ವರ್ ಮಲ್ಪೆ ತಂಡ

ಮಂಗಳೂರು (ಉಡುಪಿ): ಅಂಕೋಲಾ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕ ಅರ್ಜುನ್‌  ಹುಡುಕಾಟಕ್ಕಾಗಿ ಮುಳುಗುತಜ್ಞ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಇಂದು ಶಿರೂರಿಗೆ ತೆರಳಲಿದೆ.

ಶಿರೂರಿನಲ್ಲಿ ದುರಂತ ನಡೆದು ಹನ್ನೊಂದು ದಿನಗಳು ಕಳೆದು ಹೋಗಿದ್ದು ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಭಾರತ್ ಬೆಂಝ್ ಲಾರಿ ಜೊತೆಗೆ ಚಾಲಕ ಅರ್ಜುನ್ ಮತ್ತು ಇತರ ಇಬ್ಬರು ವ್ಯಕ್ತಿಗಳ ಪತ್ತೆ ಇನ್ನೂ ಆಗಿಲ್ಲ. ಇದೀಗ ಲಾರಿ ಇದೆ ಎಂದು ಶಂಕಿಸಲಾದ ಸ್ಥಳದಲ್ಲಿ ಲಾರಿಯ ಇರುವಿಕೆಯನ್ನು ಖಚಿತ ಪಡಿಸಲು ಮತ್ತು ಲಾರಿ ಒಳಗಡೆ ಇರುವ ಚಾಲಕ ಅರ್ಜುನ್ ನನ್ನು ಹೊರತೆಗೆಯಲು ಆಪತ್ಭಾಂಧವ ಈಶ್ವರ್ ಮಲ್ಪೆಯವರಿಗೆ ಪೋಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಂದ ಕರೆ ಬಂದಿದೆ ಎನ್ನಲಾಗಿದೆ. ಇದಕ್ಕಾಗಿ ಈಶ್ವರ್ ಮಲ್ಪೆ ಮತ್ತು ತಂಡ ಇಂದು ಮಧ್ಯರಾತ್ರಿ ಮಲ್ಪೆಯಿಂದ ಹೊರಟು ಸುಮಾರು 7:30ಕ್ಕೆ ಅಂಕೋಲಾ ಶಿರೂರಿನ ಅವಘಡ ನಡೆದ ಸ್ಥಳಕ್ಕೆ ತಲುಪಿ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here