ಚಾರ್ಮಾಡಿ ಘಾಟಿಯಲ್ಲಿ ರಸ್ತೆಗುರುಳಿದ ಮರ – ಮೂಡಿಗೆರೆ-ಮಂಗಳೂರು ಮಾರ್ಗ ಬಂದ್

ಮಂಗಳೂರು (ಮೂಡಿಗೆರೆ): ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಭಾರಿ ಗಾತ್ರದ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಮಂಗಳೂರು- ಮೂಡಿಗೆರೆ ಸಂಪರ್ಕ ಕಡಿತಗೊಂಡಿದೆ.

ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಉದ್ದಕ್ಕೂ ವಾಹನಗಳು ನಿಂತಿದ್ದು, ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಕಿಲೋಮೀಟರ್ ಗಟ್ಟಲೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here