ಚೇಲಾಗಳಿಂದ ಪೇಪರ್‌ ಗಳಲ್ಲಿ ಇಟ್ಟು ಪೆನ್‌ ಡ್ರೈವ್‌ ಹಂಚಿಸಿದ್ದೆ ವಿಜಯೇಂದ್ರ ‌- ಗಂಭೀರ ಆರೋಪ ಮಾಡಿದ ಯತ್ನಾಳ್

ಮಂಗಳೂರು (ವಿಜಯಪುರ): ಹಾಸನದಲ್ಲಿ ಪ್ರಜ್ವಲ್ ಅಶ್ಲೀಲ ಪ್ರಕರಣದಲ್ಲಿ ತಮ್ಮ ಚೇಲಾಗಳಿಂದ ಪೇಪರ್‌ ಗಳಲ್ಲಿ ಇಟ್ಟು ಪೆನ್‌ ಡ್ರೈವ್‌ ಹಂಚಿಸಿದ್ದೆ ವಿಜಯೇಂದ್ರ ಎಂದು ಗಂಭೀರ ಆರೋಪ ಮಾಡಿದ ಯತ್ನಾಳ್, ಪಕ್ಷದಲ್ಲಿ ಈಗ ಪದಾಧಿಕಾರಿಗಳಾಗಿ ಇರುವ ಶೇ.50 ರಷ್ಟು ಸಿ.ಡಿ, ಕಂಪನಿಯೇ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಕುಟುಂಬದ ಮಾನ-ಮರ್ಯಾದೆ ಕಳೆದದ್ದೇ ವಿಜಯೇಂದ್ರ. ಆತನ ನಿರ್ದೇಶನದಿಂದಲೇ ಪೆನ್‍ಡ್ರೈವ್ ಹಂಚಿದ್ದು, ತಾಕತ್ತಿದ್ದರೆ ನನ್ನನ್ನು ಕೇಳಲಿ, ಬಿಜೆಪಿಯ ಪಕ್ಷ ಎಷ್ಟು ಎಂಎಲ್‍ಎಗಳನ್ನು ಬ್ಲಾಕ್ ಮೇಲ್ ಮಾಡುತ್ತೀರಿ ಎಂದು ಪ್ರಶ್ನಿಸಿದ ಅವರು ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ ಭ್ರಷ್ಟ ವಿಜಯೇಂದ್ರನ ವಿರುದ್ಧ ಕ್ರಮ ಕೈಗೊಳ್ಳಲಿ. ತಪಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು ಹಾಕಿದ್ದಾರೆ.

ಆ.3ರಂದು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಯತ್ನಾಳ್‌ , ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವ ನನ್ನನ್ನು ಹೊರ ಹಾಕಲಿ ಎಂದು ರಾಜ್ಯದ ಜನರಿಗೆ ಹೇಳುತ್ತೇನೆ. ಪಕ್ಷದ ಹೈಕಮಾಂಡ ಯತ್ನಾಳ‌ ಪಕ್ಷ ವಿರೋಧ ಚಟುವಟಿಕೆ ಮಾಡುತ್ತಿದ್ದಾರೆ ಎಂದು ನನ್ನನ್ನು ಹೊರಹಾಕಲಿ. ನನ್ನ ಭ್ರಷ್ಟಾಚಾರ ಇದ್ದರೆ ಹೊರ ಹಾಕಲಿ, ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ ಅವರು ವಿಜಯೇಂದ್ರಗೆ ಆಗಿರುವ ಸೆಟ್‍ಬ್ಯಾಕ್ ಏನೇಂದರೆ ನಿಂತು ಸಹಿ ಮಾಡಿಸಿಕೊಂಡಿದ್ದು, ಈ ಮನುಷ್ಯ ವಿಜಯೇಂದ್ರ ಅಡ್ಜಸ್ಟಮೆಂಟ್ ಇದ್ದಾನೆ. ನಾನು ಹೈಕಮಾಂಡನ್ನು ಇದೇ ಕೇಳುತ್ತೇನೆ, ವಿಜಯೇಂದ್ರನ ಕೃಪೆಯಿಂದ ಉಮೇಶ ಕಾಂಟ್ರಾಕ್ಟರ್ ಮನೆಯಲ್ಲಿ ಸಿಕ್ಕ ಸಾವಿರ ಕೋಟಿ ರೂ ಮೌಲ್ಯದ ದಾಖಲೆಗಳು, ಕೌಂಟಿಂಗ್ ಮಾಡುವ ನಾಲ್ಕು ಮೆಷಿನ್ ಸಿಕ್ಕವಲ್ಲ ಅವೆಲ್ಲ ಎಲ್ಲಿ ಹೋದವು ಎಂದು ಪ್ರಶ್ನಿಸಿದ್ದಾರೆ. ಪಕ್ಷದಲ್ಲಿ ಹಿರಿಯರ ಬಗ್ಗೆ ವಿಜಯೇಂದ್ರಗೆ ಗೌರವವೇ ಇಲ್ಲ. ಪಾದಯಾತ್ರೆ ಮಾಡುವ ಕುರಿತು ಪಕ್ಷದ ಹಿರಿಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿಲ್ಲ. ಅವರಪ್ಪ ಹೇಳಿದ, ಬಾಡಿಗೆ ಜನರನ್ನು ತಂದು ಪಾದಯಾತ್ರೆ ಹೋರಾಟ ಮಾಡು, ನೀನು ಹೀರೋ ಆಗುತ್ತಿಯಾ ಎಂದು ಹೇಳಿದ, ವಿಜಯೇಂದ್ರ ತಾನೇ ಏಕಪಕ್ಷೀಯ ನಿರ್ಧಾರ ಕೈಗೊಂಡ ಎಂದು ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here