ರಸ್ತೆ ಬದಿ ಮಹಿಳೆಯನ್ನು ಎಳೆದಾಡಿ ಚುಂಬಿಸಿದ ಕಾಮುಕ ಅರೆಸ್ಟ್

ಮಂಗಳೂರು (ಬೆಂಗಳೂರು): ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ಎಳೆದಾಡಿ, ಚುಂಬಿಸಿ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಚಾಲಕ ಸುರೇಶ್(25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆ.2ರಂದು ಬೆಳಗಿನ ಜಾವ 5 ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್ ಗೆ ವಾಕಿಂಗ್ ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಆರೋಪಿ ಪರಾರಿಯಾಗಿದ್ದ.

ಈ ಘಟನೆಯಿಂದ ಭಯಗೊಂಡು ಮುಜುಗರಕ್ಕೊಳಗಾಗಿದ್ದ ಮಹಿಳೆ ವಾಕಿಂಗ್ ಗೆ ತೆರಳದೆ ಮನೆಗೆ ತೆರಳಿದ್ದರು.ಅಲ್ಲದೇ ಪೊಲೀಸರಿಗೆ ದೂರು ನೀಡಲು ಸಹ ಹಿಂಜರಿದಿದ್ದರು ಎನ್ನಲಾಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೋಣನಕುಂಟೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದು ಆರೋಪಿಯನ್ನು ಬಂಧಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಹಿನ್ನೆಲೆ ಕೋಣನಕುಂಟೆ ಠಾಣೆಯ ಮೂವರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

LEAVE A REPLY

Please enter your comment!
Please enter your name here