ಕೆತ್ತಿಕಲ್‌ನಲ್ಲಿ 12, ಬಳ್ಳೂರುಗುಡ್ಡೆಯ 4 ಮನೆಗಳ ಸ್ಥಳಾಂತರ -ಮೇಯರ್‌ ಸುಧೀರ್‌ ಶೆಟ್ಟಿ

ಮಂಗಳೂರು: ‍ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗಿ 16 ಮನೆಗಳು ಅಪಾಯಕ್ಕೆ ಸಿಲುಕಿದ್ದು, ಬೇರೆ ಕಡೆಗೆ ಸ್ಥಳಾಂತರಗೊಳ್ಳುವಂತೆ ಸಂತ್ರಸ್ತ ಕುಟುಂಬಗಳಿಗೆ ಪಾಲಿಕೆ ಸೂಚನೆ ನೀಡಿದೆ.

ಕೆತ್ತಿಕಲ್‌ನಲ್ಲಿ 12 ಮನೆಗಳು ಹಾಗೂ ಕಣ್ಣೂರಿನ ಬಳ್ಳೂರುಗುಡ್ಡೆಯಲ್ಲಿ 4 ಮನೆಗಳು ಮಳೆಯಿಂದಾಗಿ ಅಪಾಯಕ್ಕೆ ಸಿಲುಕಿವೆ. ಬೇರೆಡೆ ಸ್ಥಳಾಂತರಗೊಳ್ಳುವಂತೆ ಈ ಕುಟುಂಬಗಳಿಗೆ ಸೂಚಿಸಿದ್ದೇವೆ’ ಎಂದು ಮೇಯರ್‌ ಸುಧೀರ್ ಶೆಟ್ಟಿ ಕಣ್ಣೂರು ಆ.5ರಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರಿಗೆ ಬಾಡಿಗೆ ಮೊತ್ತ ಮರುಪಾವತಿ ಮಾಡುವಿರಾ ಎಂಬ ಪತ್ರಕರ್ತರ ಪ್ರಶ್ನೆಗೆ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿದರೆ ನೀಡುತ್ತೇವೆ. ಪಾಲಿಕೆ ಬಳಿ ಹಣವಿಲ್ಲ ಎಂದು ಅವರು ಹೇಳಿದ್ದಾರೆ.

ಕೆತ್ತಿಕಲ್‌ನಲ್ಲಿ ಪಾಲಿಕೆ ನಿರ್ಮಿಸುತ್ತಿರುವ ವೆಟ್‌ವೆಲ್‌ ಅನ್ನು ಸುರತ್ಕಲ್‌ ಎನ್‌ಐಟಿಕೆ ತಜ್ಞರು ಪರಿಶೀಲಿಸಲಿದ್ದಾರೆ. ಅವರು ಅಧ್ಯಯನ ನಡೆಸಿ ವರದಿ ನೀಡಿದ ಬಳಿಕ ಅಲ್ಲಿ ಕಾಮಗಾರಿ ಮುಂದುವರಿಸಬೇಕೋ ಬೇಡವೋ ಎಂದು ನಿರ್ಧರಿಸುತ್ತೇವೆ. ವಾರ್ಡ್ ಸಮಿತಿ ಉಪವಿಧಿಗಳ  ಕರಡಿನಲ್ಲಿ ಕೆಲವೊಂದು ಲೋಪಗಳಿದ್ದವು. ಆ ಕರಡನ್ನು ಪರಿಷ್ಕರಿಸಿದ್ದು, ‌ಪಾಲಿಕೆಯ ಮುಂದಿನ ಸಭೆಯಲ್ಲಿ ಮಂಡಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here