ಪ್ರತಿಭಟನೆ, ಮುಷ್ಕರದಲ್ಲಿ ವಕೀಲರು ಭಾಗಿಯಾಗುವಂತಿಲ್ಲ – ವಕೀಲರ ಸಂಘದ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟೀಸ್

ಮಂಗಳೂರು(ದೆಹಲಿ): ವಕೀಲರು ಪ್ರತಿಭಟನೆ ಯಾ ಮುಷ್ಕರಗಳಲ್ಲಿ ಭಾಗಿಯಾಗುವಂತಿಲ್ಲ ಎಂಬ ನಿಯಮವಿದ್ದರೂ ವಕೀಲರು ಮುಷ್ಕರದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ವಿವರಣೆ ನೀಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಾರ್ ಎಸೋಸಿಯೇಷನ್ ಮುಖ್ಯಸ್ಥರಿಗೆ ನ್ಯಾಯಾಂಗ ನಿಂದನೆಯಡಿ ನೋಟೀಸ್ ಜಾರಿಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾ.ಅಭಯ ಶ್ರೀನಿವಾಸ್ ಓಕಾ ಮತ್ತು ನ್ಯಾ. ಆಗಸ್ಟಿನ್ ಜಾರ್ಜ್‌ ಮಸಿಹ್ ಅವರಿದ್ದ ನ್ಯಾಯಪೀಠ ಈ ನೋಟೀಸ್ ಜಾರಿಗೊಳಿಸಿದೆ. ವಕೀಲರು ತಾವು ಪ್ರತಿನಿಧಿಸಬೇಕಿದ್ದ ಕೇಸಿನ ವಿಚಾರಣೆ ನಡೆಯುವಾಗ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದರಿಂದ ಆ ಕೇಸಿನ ಕಲಾಪದಲ್ಲಿ ವಕೀಲರು ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಪ್ರತಿಕೂಲ ಆದೇಶ ಹೊರಡಿಸಿತ್ತು.

ವಕೀಲರು ಮುಷ್ಕರ ಯಾ ಪ್ರತಿಭಟನೆಯಲ್ಲಿ ಭಾಗಿಯಾಗಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಆದೇಶ ಇದ್ದರೂ ವಕೀಲರು ಮುಷ್ಕರ ನಡೆಸುವುದು ಮತ್ತು ಕಲಾಪದಿಂದ ದೂರು ಇರುವುದು ಸರಿಯಲ್ಲ. ಇಂತಹ ಬೆಳವಣಿಗೆಗಳನ್ನು ತಕ್ಷಣದಿಂದ ನಿಲ್ಲಿಸಬೇಕು ಎಂದು ನ್ಯಾಯಪೀಠ ಖಡಕ್ ಆಗಿ ಹೇಳಿದೆ. ಈ ಬಗ್ಗೆ ಸ್ಪಷ್ಟೀಕರಣ ನೀಡಲು ವಕೀಲರ ಸಂಘದ ಪದಾಧಿಕಾರಿಗಳಿಗೆ ಕಲಾಪದಲ್ಲಿ ಭಾಗಿಯಾಗಿ ವಿವರಿಸಲು ಸುಪ್ರೀಂ ಕೋರ್ಟ್‌ ಹೊರಡಿಸಿದ ಸಮನ್ಸ್‌ನಲ್ಲಿ ಹೇಳಲಾಗಿದೆ.

 

LEAVE A REPLY

Please enter your comment!
Please enter your name here