ವೈದ್ಯೆಯ ಅತ್ಯಾಚಾರ, ಹತ್ಯೆ ಖಂಡಿಸಿ ನಾಳೆ (ಆ.17) ದೇಶಾದ್ಯಂತ ವೈದ್ಯರ ಪ್ರತಿಭಟನೆ

ಮಂಗಳೂರು(ಹೊಸದಿಲ್ಲಿ): ಕೊಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಂತ್ರಸ್ತೆಯ ಹತ್ಯೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ನಾಳೆ(ಆ. 17)  ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ ನಿರ್ಧರಿಸಿದೆ.

ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ 24 ಗಂಟೆಗಳ ಕಾಲ ಎಲ್ಲಾ ಸೇವೆಗಳಿಂದ ವೈದ್ಯರು ದೂರ ಉಳಿಯಲಿದ್ದಾರೆ ಎಂದು ಐಎಂಎ ಪ್ರಕಟಿಸಿದೆ.

LEAVE A REPLY

Please enter your comment!
Please enter your name here