17 ಬೈಕ್​​ಗಳಿಗೆ ಡಿಕ್ಕಿ ಹೊಡೆದ ಕಾರು – ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು (ಹಾಸನ): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 17 ಬೈಕ್‌ಗಳಿಗೆ ಡಿಕ್ಕಿ ಹೊಡೆದ ಘಟನೆ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಕೆಂಕೆರೆಹಳ್ಳಿ ಗೇಟ್ ಬಳಿ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಕಾರಣ ಸವಾರರು ಬೈಕ್‌ ನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಇದೇ ವೇಳೆ ಅತೀ ವೇಗವಾಗಿ ಬಂದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಓರ್ವನಿಗೆ ಗಾಯವಾಗಿದೆ. ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here