ಗುಡ್ಡ ಕುಸಿತ -ಮಣ್ಣಿನಡಿಗೆ ಸಿಲುಕಿ ಓರ್ವ ಸಾವು 5 ಮಂದಿಗೆ ಗಾಯ

file photo

ಮಂಗಳೂರು : ರೈಲ್ವೇ ಸೇತುವೆ ಬಳಿ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದು ಓರ್ವ ಮೃತಪಟ್ಟಿದ್ದು ಐವರಿಗೆ ಗಾಯವಾದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದಪ್ಪ , ತಿಮ್ಮಪ್ಪ , ಈರಣ್ಣ ,ಸಂಜೀವ ಮತ್ತು ಆತನ ಪತ್ನಿ ತೃಪ್ತಿ ಗಾಯಗೊಂಡಿದ್ದಾರೆ.ಈ ಪೈಕಿ ಗೋವಿಂದಪ್ಪ ಆವರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಘಟನೆಗೆ ಸಂಬಂಧಿಸಿ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here