ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಶನಿವಾರ ಬೆದರಿಕೆ ಕರೆ ಬಂದಿರುವುದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿ ಕಚೇರಿಗೆ ಬೆಳಿಗ್ಗೆ 11.25, 11.32 ಮತ್ತು ಮಧ್ಯಾಹ್ನ 12.30 ಕ್ಕೆ ಕರೆಮಾಡಿ ಕೊಲೆಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಎನ್ಡಿ ಟಿವಿ ವರದಿ ಮಾಡಿದೆ. ಗಡ್ಕರಿ ಕಚೇರಿಯಿಂದ ಬಂದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಡ್ಕರಿಯವರ ಸಾರ್ವಜನಿಕ ಸಂಪರ್ಕ ಕಚೇರಿಯು ಮನೆಯಿಂದ ಸುಮಾರು 1ಕೀ.ಮೀ ದೂರದಲ್ಲಿದೆ.