ಮಂಗಳೂರು: ನಗರವನ್ನು ಬೆಚ್ಚಿ ಬೀಳಿಸಿದ್ದ ರಾಷ್ಟ್ರೀಯ ಹೆದ್ದಾರಿ 75 ರ ನಾಗುರಿ ಎಂಬಲ್ಲಿ ನ.19 ರಂದು ನಡೆದ ಕುಕ್ಕರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ್ ಗುಣಮುಖರಾಗಿ ಚೇತರಿಸಿಕೊಂಡಿದ್ದು 57 ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸ್ಪೋಟದಲ್ಲಿ ಆರೋಪಿ ಮಹಮ್ಮದ್ ಶಾರೀಕ್ ಮತ್ತು ಮಂಗಳೂರಿನ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದು ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಶಾರೀಕ್ನನ್ನು ಕೆಲ ದಿನಗಳ ಹಿಂದೆ ಎನ್ ಐ ಎ ತಂಡ ಬೆಂಗಳೂರಿಗೆ ಕರೆದೊಯ್ದಿದೆ.