ಮಾದಕ ವಸ್ತು ಸಾಗಾಟ- ಇಬ್ಬರ ಬಂಧನ

ಮಂಗಳೂರು: ಮಂಗಳೂರು ಹೊರವಲಯದ ಸೋಮೇಶ್ವರ ಗ್ರಾಮದ ಉಚ್ಚಿಲ ರಿಲಯನ್ಸ್‌ ಪೆಟ್ರೋಲ್‌ ಬಂಕ್‌ ಬಳಿ ಮಾದಕ ವಸ್ತು ಮಾರಾಟ ಮಾಡಲು ಯತ್ನಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲ ಅಝಾದ್‌ ನಗರದ ನಿವಾಸಿ ಮಹಮ್ಮದ್‌ ಖಾಲಿದ್‌ (39) ಮತ್ತು ಮಂಜೇಶ್ವರ ಕುಂಜತ್ತೂರು ಪದವು ನಿವಾಸಿ ಲಿಖಿತ್‌ ಎಂದು ಗುರುತಿಸಲಾಗಿದೆ.ಬಂಧಿತರಿಂದ 20 ಸಾವಿರ ರೂ. ಮೌಲ್ಯದ 10 ಗ್ರಾಂ ಎಮ್‌ಡಿಎಮ್‌ಎ, 1 ಸ್ಕೂಟರ್‌ , 2 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here