ಮೆಲ್ಕಾರ್‌-ಜೀಪ್‌ ಡಿಕ್ಕಿ , ಬೈಕ್‌ ಸವಾರ ಮೃತ್ಯು

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿ ನೇತೃತ್ವದ ಗ್ರಾಮವಿಕಾಸ್‌ ಯಾತ್ರೆಯ ಪ್ರಚಾರ ವಾಹನ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ.ಮೆಲ್ಕಾರ್‌ ಸಮೀಪದ ನರಹರಿ ಬಳಿ ಸೋಮವಾರ ಬೆಳಿಗ್ಗೆ ನಡೆದ ಈ ಅಪಘಾತದಲ್ಲಿ ಬೈಕ್‌ ಸವಾರ ಮೃತ ಪಟ್ಟಿದ್ದಾರೆ.

ಮೃತರನ್ನು ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ವಿಜಿತ್‌ (35) ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ಗ್ರಾಮವಿಕಾಸ್ ಪಾದಯಾತ್ರೆಯ ಪ್ರಚಾರ ಮಾಡುತ್ತಿದ್ದ ತೆಲಂಗಾಣ ರಾಜ್ಯದ ನೋಂದಣಿ ಹೊಂದಿರುವ ಜೀಪ್‌ ಮತ್ತು ಬೈಕ್‌ ನಡುವಿನ ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರ ವಿಜಿತ್‌ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here