ಉಡುಪಿ : ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ಲಾರಿ ಹಿಂಬಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದಲ್ಲಿ ಜ.17ರ ರಾತ್ರಿ ನಡೆದಿದೆ. ಉಡುಪಿಯ ಸಂಜೆ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮಿತ್ ಕುಮಾರ್ ಮತ್ತು ವಾಘೇಶ್ ಕಾಲೇಜು ಮುಗಿಸಿ ಮನೆಗೆ ಹಿಂದುರುಗುವ ವೇಳೆ ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಲಾರಿ ಹಿಂಬಾಗಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಅಪ್ಪಳಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.