ಬೆಳ್ಮಣ್ :ಒಮ್ನಿ ಕಾರಿನಲ್ಲಿ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಜ.25 ರ ಬುಧವಾರ ತಡರಾತ್ರಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೃಷ್ಣಸಫಲಿಗ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ಕಳೆದ ರಾತ್ರಿ ತಮ್ಮನ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಬಳಿಕ ಈ ಕೃತ್ಯ ಎಸಗಿದ್ದಾರೆ.
ಮಾನಸಿಕವಾಗಿ ನೊಂದಿದ್ದ ಕೃಷ್ಣ ಸಫಲಿಗ ಆತ್ಮಹತ್ಯೆಗೂ ಮುನ್ನ ತನಗೆ ಸಿಗಬೇಕಾಗಿದ್ದ ಹಣ ಮತ್ತು ಪಡೆದವರ ವಿವರವನ್ನು ಬರೆದು ಚೀಟಿಯನ್ನು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು ಅದರಲ್ಲಿ ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಹೇಳಲಾಗಿದೆ.ಒಮ್ನಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.