ಬಸ್ಸಿಗೆ ಕಾರು ಡಿಕ್ಕಿ – ಜೀವ ಚೆಲ್ಲಿದ ಕಾರಿನಲ್ಲಿದ್ದ ಪ್ರಯಾಣಿಕರು

ಮುಂಬೈ: ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ ಇಂದು ಮುಂಜಾನೆ (ಜ.31)ಐಷಾರಾಮಿ ಬಸ್ಸೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗುಜರಾತ್ ಕಡೆಗೆ ಹೊರಟಿದ್ದ ಕಾರು ಬೆಳಗಿನ ಜಾವ 3.30ರ ಸುಮಾರಿಗೆ ಚರೋಟಿಯ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಕಾರಿನಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಚರೋಟಿ ಬಳಿ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು. ಈ ವರ್ಷ ಜನವರಿ 8 ರಂದು ಮಹಾಲಕ್ಷ್ಮಿ ದೇವಸ್ಥಾನದ ಬಳಿ ಕಂಟೈನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಒಂದು ಶಿಶು ಸೇರಿದಂತೆ ನಲಸೋಪರ ಕುಟುಂಬದ ಮೂವರು ಸಾವನ್ನಪ್ಪಿದ್ದರು.

LEAVE A REPLY

Please enter your comment!
Please enter your name here