ಧನ್ ಬಾದ್: ಜಾರ್ಖಂಡ್ ನ ಧನ್ ಬಾದ್ ನ 13 ಅಂತಸ್ತಿನ ಆರ್ಶೀವಾದ ಟವರ್ ನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 10 ಮಹಿಳೆಯರು , ಮೂವರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿದ್ದಾರೆ. ಜ.31ರಂದು ಸಂಜೆ ಈ ಘಟನೆ ಸಂಭವಿಸಿದೆ. 11 ಮಂದಿಯನ್ನು ರಕ್ಷಿಸಲಾಗಿದ್ದು, ಇವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಬೆಂಕಿ ನಂದಿಸಲಾಗಿದ್ದು ಶೋಧ ಕಾರ್ಯಾಚರಣೆ ಮುಗಿದಿದೆ. ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಮುಖ್ಯ ಮಂತ್ರಿ ಹೇಮಂತೆ ಸೊರೇನ್ ದುರಂತದ ಬಗ್ಗೆ ತೀವ್ರ ಅಘಾತ ವ್ಯಕ್ತ ಪಡಿಸಿದ್ದಾರೆ. ಅಗ್ನಿ ದುರಂತ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.