ವಿಷಾಹಾರ – ವಿದ್ಯಾರ್ಥಿನಿಯರ ಅಸ್ವಸ್ಥ ಪ್ರಕರಣ- ದೂರು ದಾಖಲು

ಮಂಗಳೂರು: ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿಲಯದ ಆಡಳಿತ ಮಂಡಳಿಯ ವಿರುದ್ಧ ವೈದ್ಯರೊಬ್ಬರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿಟಿ ನರ್ಸಿಂಗ್‌ ಕಾಲೇಜ್‌ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಸಂಶಯಾಸ್ಪದ ವಿಷಪೂರಿತ ಆಹಾರ ನೀಡಿ ಅಸ್ವಸ್ಥರಾಗುವಂತೆ ಮಾಡಲಾಗಿದೆ. ಅಲ್ಲದೆ, ಘಟನೆಯ ಬಗ್ಗೆ ಆಡಳಿತ ಮಂಡಳಿಯು ಜಿಲ್ಲಾಡಳಿತಕ್ಕೆ ವರದಿ ನೀಡದೇ ಲೋಪ ಎಸಗಿದೆ. ಈ ಬಗ್ಗೆ ಸೂಕ್ತ ಕ್ರಮ ಪಾಲಿಸದಿರುವ ಆಡಳಿಯ ಮಂಡಳಿಯ ವಿರುದ್ಧ ಕ್ರಮಕೈಗೊಳ್ಳುವಂತೆ ದ.ಕ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳೆದ ರಾತ್ರಿ ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಸರ್ಸಿಂಗ್‌ ಕಾಲೇಜಿಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ 130 ಕ್ಕೂ ಅಧಿಕ ವಿದ್ಯಾರ್ಥಿನಿಯರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿತ್ತು.

LEAVE A REPLY

Please enter your comment!
Please enter your name here