ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಚಲಾಯಿಸುವಂತೆ ಬುದ್ದಿ ಹೇಳಿದ ವ್ಯಕ್ತಿಯ ತಲೆಯ ಮೇಲೆ ರಾಡ್ ನಿಂದ ಹೊಡೆದು ನೆಲಕ್ಕುರುಳಿದ ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ.
ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಹಾರೀಸ್ ಕೊಲೆ ಮಾಡಿ ಬಂಧಿತನಾಗಿರುವ ವ್ಯಕ್ತಿ. ಕಳೆದ ಶುಕ್ರವಾರ ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಎಂಬವರ ಮೇಲೆ ಟಿಪ್ಪರ್ ಚಲಾಯಿಸಿ ಹತ್ಯೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ ಈತನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದು ಮೂರು ದಿನಗಳ ನಂತರ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.