ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಕುಟುಕು ಕಾರ್ಯಾಚರಣೆ ಬಳಿಕ ನೀಡಿದ ಹೇಳಿಕೆಯಿಂದ ಸೃಷ್ಟಿಯಾಗಿರುವ ವಿವಾದದ ನಡುವೆ ಇಂದು ಶುಕ್ರವಾರ ಫೆ.17ರಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜೈ ಶಾ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಎಎನ್ ಐ ಟ್ವೀಟ್ ಮಾಡಿದೆ. 80 ರಿಂದ 85ರಷ್ಟು ಫಿಟ್ ಆಗಿದ್ದರೂ ಸ್ಫರ್ಧಾತ್ಮಕ ಕ್ರಿಕೆಟ್ ಗೆ ಮರಳಲು ಬಹಳಷ್ಟು ಆಟಗಾರರು ಚುಚ್ಚು ಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಶರ್ಮಾ ಆರೋಪಿಸಿದ್ದರು. ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿಗೆ ಬುಮ್ರಾ ವಾಪಾಸಾಗುವ ಬಗ್ಗೆ ತನ್ನ ಹಾಗೂ ಮ್ಯಾನೇಜ್ ಮೆಂಟ್ ನಡುವೆ ಬಿನ್ನಾಭಿಪ್ರಾಯವಿತ್ತು ಎಂದು ಚೇತನ್ ಶರ್ಮಾ ಕುಟುಕು ಕಾರ್ಯಾಚರಣೆಯಲ್ಲಿ ಹೇಳಿದ್ದರು.