ಇದು ನನ್ನ ಕೊನೆಯ ಅಧಿವೇಶನ – ಸದನದಲ್ಲಿ ಭಾವುಕರಾದ ಬಿಎಸ್ ವೈ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ’ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ’ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ನುಡಿದಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬಿಜೆಪಿ ಯಡಿಯೂರಪ್ಪನವರನ್ನು ಕಡೆಗಣಿಸಿದೆ ಎಂದು ವಿಪಕ್ಷಗಳ ಆರೋಪ ಮಾಡುತ್ತಿವೆ. ಆದರೆ, ಬಿಜೆಪಿ ಅಥವಾ ಪ್ರಧಾನಿ ಮೋದಿ ನನ್ನನ್ನು ಕಡೆಗಣಿಸಿಲ್ಲ. ಇದುವರೆಗೆ ಹಲವು ಅವಕಾಶಗಳನ್ನು ನನಗೆ ನೀಡಿವೆ. ಹೀಗಾಗಿ ಪಕ್ಷ ಹಾಗೂ ಮೋದಿಯವರಿಗೆ ನಾನು ಋಣಿಯಾಗಿದ್ದೇನೆ’ ಎಂದು ಹೇಳಿದ ಅವರು ನನ್ನ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಸಿಎಂ ಆಗುವ ಅವಕಾಶವನ್ನು ಬಿಜೆಪಿ ನನಗೆ ಕೊಟ್ಟಿದೆ. ಇನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here