ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರು ಕಮಿಷನ್ ಕಿರುಕುಳಕ್ಕೆ ಬೇಸತ್ತು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ಫೆ.21 ಮಂಗಳವಾರ ನಡೆದಿದೆ.
ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುದಾನಗಳಿಗೆ ಅನುಮೋದನೆ ತೆಗೆದುಕೊಳ್ಳುವುದಕ್ಕೆ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಗಳಿಗೆ ಕಮಿಷನ್ ಕೊಡಬೇಕಾಗುತ್ತೆ ಎಂದು ಹೇಳಿ ಅಭಿವದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ರಾಜಿನಾಮೆ ಪತ್ರದಲ್ಲಿ ಆರೋಪಿಸಿದ್ದಾರೆ. ಅಧಿಕಾರಿಗಳು ಬೇಡಿಕೆ ಇಟ್ಟಿರುವ ಅಷ್ಟೊಂದು ಹಣ ಕೊಡುವದಕ್ಕೆ ನನಗೆ ಸಾಧ್ಯವಾಗುತ್ತಿಲ್ಲವಾದುದರಿಂದ ಸುಧಾ ಸಿದ್ದಪ್ಪ ರಾಜಂಗಳೆ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.