ಖ್ಯಾತ ಲೇಖಕಿ ವೈದೇಹಿಗೆ ನೃಪತುಂಗ, ಐವರಿಗೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ 2022ನೇ ಸಾಲಿನ ಪ್ರತಿಷ್ಠಿತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯನ್ನು ಪ್ರಕಟಿಸಿದೆ.

2022ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿಗೆ  ಹಿರಿಯ ಲೇಖಕಿ ವೈದೇಹಿ ( ಜಾನಕಿ ಶ್ರೀನಿವಾಸ ಮೂರ್ತಿ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯೂ 7 ಲಕ್ಷ ನಗದು ಮತ್ತು ಪ್ರಮಾಣ ಪತ್ರವನ್ನೊಳಗೊಂಡಿದೆ. 

2022ನೇ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಗದಗ ಜಿಲ್ಲೆಯ ಗಜೇಂದ್ರಘಡದ ಹನುಮಂತ ಸೋಮನಕಟ್ಟಿ , ವಿಜಯನಗರ ಜಿಲ್ಲೆಯ ಕೊಟ್ಟೂರಿನ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ! ಸತ್ಯಮಂಗಲ ಮಹಾದೇವ್‌, ವಿಜಯ ಕರ್ನಾಟಕ ಪುರವಣಿ ಮುಖ್ಯಸ್ಥೆ ವಿದ್ಯಾ ರಶ್ಮಿ ಪೆಲತ್ತಡ್ಕ ಹಾಗೂ ಹಾಸನದ ಬೇಲೂರು ರಘುನಂದನ ಅವರನ್ನು ಆಯ್ಕೆ ಮಾಡಲಾಗಿದೆ.  ಈ ಪ್ರಶಸ್ತಿಯೂ 25001 ನಗದು ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here