ಮೈಸೂರು ಸ್ಯಾಂಡಲ್‌ ಸೋಪ್‌ ಗುಣಮಟ್ಟದ ಬಗ್ಗೆ ಆತಂಕ‌ – ನಾಗತಿಹಳ್ಳಿ ಚಂದ್ರಶೇಖರ್‌ ಟ್ವೀಟ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಮೈಸೂರು ಸ್ಯಾಂಡಲ್‌ ಸೋಪ್‌ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತ ಪಡಿಸಿ ಟ್ವೀಟ್‌ ಮೂಲಕ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. 

ಬಾರೀ ದೊಡ್ಡ ಮಟ್ಟದ ಹಗರಣ ಮೈಸೂರು ಸ್ಯಾಂಡಲ್‌ ಸೋಪ್‌ ತಯಾರಿಸುವ ಸಂಸ್ಥೆಯಲ್ಲಿ ನಡೆದಿದ್ದು ಸೋಪ್‌ ಗೆ ಉಪಯೋಗಿಸುವ ಕಚ್ಚಾ ವಸ್ತುಗಳು ಕಳಪೆ ಗುಣಮಟ್ಟದ್ದಾಗಿರಬಹುದೆಂಬ ಆತಂಕವನ್ನು ನಾಗತಿಹಳ್ಳಿ ಚಂದ್ರಶೇಖರ್‌ ವ್ಯಕ್ತ ಪಡಿಸಿದ್ದಾರೆ.

ಮಾಡಾಳರು ಮಾಡಿದ ಭ್ರಷ್ಟತೆ ಹಾಗೂ ಕಲಬೆರಕೆಯ ಕಾರಣ ಸರಕಾರಿ ಸ್ವಾಮ್ಯದ ಉದ್ಯಮ ಮತ್ತು ಉತ್ಪನ್ನಗಳಲ್ಲಿ ಗೌರವ ಮತ್ತು ನಂಬಿಕೆ ಇರಿಸಿದ ನನ್ನಂತವರು ಬಹುಕಾಲದಿಂದ ಬಳಸುತ್ತಿರುವ ಮೈಸೂರು ಸ್ಯಾಂಡಲ್‌ ಸೋಪನ್ನು ಈಗ ಬಳಸಲು ಹಿಂಜರಿಯುವಂತಾಗಿದೆ ಎಂದು ನಾಗತಿಹಳ್ಳಿ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ. 

 

LEAVE A REPLY

Please enter your comment!
Please enter your name here