ಮಾದಕ ವಸ್ತು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ನಾಲ್ವರ ಬಂಧನ

ಕಾಸರಗೋಡು: ಗಾಂಜಾ ಮತ್ತು ಎಂಡಿಎಂಎ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

 ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಕೋಟೆಕ್ಕಾರ್ ಬೀರಿಯ ನಿಖಿಲ್ ಶೆಟ್ಟಿ(23) ಮತ್ತು ರಾಹುಲ್(24)ಎಂಬವರನ್ನು ಮಂಜೇಶ್ವರ ಕುಂಜತ್ತೂರು ಪದವು ಎಂಬಲ್ಲಿ ಬಂಧಿಸಲಾಗಿದ್ದು, ಇನ್ನೊಂದೆಡೆ ಎಂಡಿಎಂಎ ಮಾದಕ ವಸ್ತು ಸಹಿತ ಅಫ್ರಿದ್(32) ಮತ್ತು ತಹಿಮ್(21)ಎಂಬವರನ್ನು ಮಂಜೇಶ್ವರ ಪೊಲೀಸರು ಖಚಿತ ಮಾಹಿತಿ ಆಧಾರದಲ್ಲಿ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here