ಪ್ರತಿಭಟನೆಗೆಂದು ಬಂದ ವ್ಯಕ್ತಿಯ ಆಟೋವನ್ನೇ ಕದ್ದೊಯ್ದ ಕಳ್ಳ

ಮಂಗಳೂರು:ರೈತಸಂಘವು ತಾಲೂಕು ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ನಡೆಸಿದ ಪ್ರತಿಭಟನೆಗೆಂದು ಬಂದ ವ್ಯಕ್ತಿಯೊರ್ವರ ಆಟೋವೊಂದನ್ನು ಕಳವು ಮಾಡಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ವಿಟ್ಲದ ಯೋಗೀಶ್ ಕುಮಾರ್ ಎಂಬವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಬಿ ಸಿ ರೋಡಿನ ಲಯನ್ಸ್ ಕ್ಲಬ್ ಭವನದ ಬಳಿ ತನ್ನ ಆಟೋ ರಿಕ್ಷಾವನ್ನು ನಿಲ್ಲಿಸಿ, ರೈತರ ಪ್ರತಿಭಟನೆಗೆ ತೆರಳಿದ್ದು, ಪ್ರತಿಭಟನೆ ಮುಗಿದು ಹಿಂತಿರುಗುವ ವೇಳೆ ಯೋಗೀಶ್,  ಆಟೋ ರಿಕ್ಷಾವು ನಿಲ್ಲಿಸಿದ್ದ ಸ್ಥಳದಲ್ಲಿ ಕಾಣದಾದಾಗ ಕಳ್ಳರು ಆಟೋ ರಿಕ್ಷಾ ಕಳವು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಯೋಗೀಶ್  ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here