ಆಟವಾಡಲು ಹೋದ ಬಾಲಕ – ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಆಟವಾಡಲೆಂದು ಮನೆಯಿಂದ ಹೊರಟ  ವಿದ್ಯಾರ್ಥಿಯೊಬ್ಬ ಶಾಲೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಕುಂಡಂಗುಳಿಯಲ್ಲಿ ನಡೆದಿದೆ. ಮೃತರನ್ನು ಅಭಿನವ್ (17) ಎಂದು ಗುರುತಿಸಲಾಗಿದೆ.

ವಿನೋದ್ – ಶಾಲಿನಿ ದಂಪತಿಗಳ ಪುತ್ರನಾಗಿರುವ ಅಭಿನವ್ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ. ಮಾ.7ರಂದು ತರಗತಿ ಮುಗಿಸಿ ಮನೆಗೆ ಬಂದ ಅಭಿನವ್ ಆಟವಾಡಲು ಹೋಗುವುದಾಗಿ ತಿಳಿಸಿದ್ದಾತ , ಸಂಜೆಯಾದರೂ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ ಎಲ್‌ಪಿ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here