ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಮೋಹನ್ ಲಿಂಬೆಕಾಯಿ ರಾಜೀನಾಮೆ

ಮಂಗಳೂರು: ಬಿ ಎಸ್ ವೈ ಆಪ್ತ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬೆ ಕಾಯಿ ಮಾ. 16 ರಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಬಸವರಾಜ ಹೊರಟ್ಟಿಯವರನ್ನು ಬಿಜೆಪಿ ಪಕ್ಷಕ್ಕೆ ಕರೆತಂದು ಪಕ್ಷದಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಲು ಟಿಕೆಟ್ ಕೊಟ್ಟಿರುವುದಕ್ಕೆ ಲಿಂಬೆಕಾಯಿ ಬಹಿರಂಗವಾಗಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದು ಮಾತ್ರವಲ್ಲದೆ ಕಾಂಗ್ರೆಸ್ ಸೇರುವುದಾಗಿ ಹೇಳಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮೋಹನ್ ಲಿಂಬೆಕಾಯಿ ಇಂದು ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here