ನಿರ್ಮಲಾನಂದನಾಥರು ಒಕ್ಕಲಿಗರಷ್ಟೇ ಸ್ವಾಮೀಜಿ…… ಬೇರೆ ಜಾತಿಗಲ್ಲ…….

ಮಂಗಳೂರು : ಉರಿ ಗೌಡ ಮತ್ತು ನಂಜೇ ಗೌಡ ಕಾಲ್ಪನಿಕ ಪಾತ್ರಗಳು. ಅವರು ಇದ್ದರು ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಹಾಗಾಗಿ ಈ ವಿವಾದದ ಬಗ್ಗೆ ಚರ್ಚೆ ಮಾಡಬಾರದು ಎಂಬ ಅಧಿಚುಂಚನಗಿರಿ ಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆಗೆ ರಂಗಾಯಣ ನಿರ್ದೇಶಕ ಅಡ್ಡ0ಡ ಸಿ ಕಾರ್ಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ. ಬೇರೆ ಜಾತಿಗಳಿಗೆ ಅಲ್ಲ. ಒಕ್ಕಲಿಗ ಸಮುದಾಯವನ್ನು ಒಂದಾಗಿ ಇಟ್ಟುಕೊಳ್ಳುವುದು ಅವರ ಕೆಲಸ. ಹಾಗೆಂದು ಊರಿಗೌಡ, ನಂಜೇ ಗೌಡ ಕುರಿತು ಚರ್ಚೆ ನಡೆಯಲೇ ಬಾರದು ಎಂದು ಹೇಳಿದ್ದು ಸರಿಯಲ್ಲ ಎಂದು ಕಾರ್ಯಪ್ಪ ಹೇಳಿದ್ದಾರೆ.

ಅಪ್ಡೇಟ್‌

ಆದಿಚುಂಚನಗಿರಿ ನಿರ್ಮಾಲಾನಂದನಾಥ ಸ್ವಾಮೀಜಿ ಒಕ್ಕಲಿಗೆ ಮಾತ್ರ ಸ್ವಾಮೀಜಿ ಎಂಬ ಹೇಳಿಕೆ ನೀಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಿರುದ್ದ ಒಕ್ಕಲಿಗರ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಂಗಾಯಣ ಗೇಟ್‌ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಸ್ವಾಮೀಜಿ ಮತ್ತು ಸಮುದಾಯದ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

 

LEAVE A REPLY

Please enter your comment!
Please enter your name here