ಮಾದಕ ದ್ರವ್ಯ ಸೇವನೆ – ಯುವಕ ಪೊಲೀಸ್‌ ವಶಕ್ಕೆ

ಮಂಗಳೂರು: ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಓರ್ವ ವ್ಯಕ್ತಿ  ಮಾದಕ ವಸ್ತುವನ್ನು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್‌ ವೇಳೆ ಕಂಡ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ್‌ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಚಾರಣೆ ವೇಳೆ ಆತ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮದಕ ನಿವಾಸಿ ಶೋಯೆಬ್‌ ಅಕ್ತರ್‌, ಎಂದು ತಿಳಿದು ಬಂದಿದ್ದು, ವೈದ್ಯಕೀಯ ತಪಾಸಣೆ ನಡೆಸಿದಾಗ ಮಾಧಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here