ಉಂಡು ಮಲಗಿದ ಪತಿ ಪತ್ನಿ – ಬಲಿ ಪಡೆದ ರುದ್ರಾಗ್ನಿ

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ದಂಪತಿ ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಯಾದಗಿರಿಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ರವಿವಾರ ತಡರಾತ್ರಿ ನಡೆದ ಈ ಅವಘಡದಲ್ಲಿ ,ಕೆ.ಬಿ.ರಾಘವೇಂದ್ರ (39), ಶಿಲ್ಪಾ ರಾಘವೇಂದ್ರ (32) ಮೃತಪಟ್ಟಿದ್ದಾರೆ. 

ಬಟ್ಟೆ ವ್ಯಾಪಾರ ನಡೆಸುತ್ತಿದ್ದ ದಂಪತಿಗಳು ಮನೆಯ ಮೂರು ಮಹಡಿಗಳ ಪೈಕಿ ಎರಡನ್ನು ಬಟ್ಟೆ ವ್ಯಾಪಾರಕ್ಕೆ ಮೀಸಲಿಟ್ಟು ಒಂದರಲ್ಲಿ ವಾಸವಿದ್ದರು. ಎಂದಿನಂತೆ ವ್ಯವಹಾರ ಮುಗಿಸಿ ಮನೆಯಲ್ಲಿ ಮಲಗಿದ್ದು ತಡರಾತ್ರಿ ಬೆಂಕಿ ಈ ಅವಘಡ ಸಂಭವಿಸಿದೆ. ಆದರೆ ಈ ಘಟನೆ ಇಂದು ಮುಂಜಾನೆಯಷ್ಟೇ ಸಾರ್ವಜನಿಕರ ಗಮನಕ್ಕೆ ಬಂದಿದೆ. ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here