ಉಮ್ರಾ ಯಾತ್ರಿಗಳ ಬಸ್‌ ಅಪಘಾತ – 20 ಸಾವು

ಮಂಗಳೂರು: ಸೌದಿ ಅರೇಬಿಯಾಗೆ ತೆರಳಿದ್ದ ಉಮ್ರಾ ಯಾತ್ರಾರ್ಥಿಗಳ ತಂಡ ಪ್ರಯಾಣಿಸುತ್ತಿದ್ದ ಬಸ್ಸೊಂದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ 20 ಮಂದಿ ಮೃತ ಪಟ್ಟಿದ್ದಾರೆ. ನತದೃಷ್ಟ ಬಸ್ಸಿನಲ್ಲಿ ಭಾರತ ಸೇರಿದಂತೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಯಾಣಿಕರಿದ್ದರು ಎನ್ನಲಾಗಿದೆ.

ಆಸಿರ್ ನ ಉತ್ತರದಲ್ಲಿರುವ ಅಕಬಾಶಾದ ಮಹಿಲ್ ಪಾಸ್ ನಲ್ಲಿ ಬಸ್ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ 20 ಮಂದಿ ಮೃತ ಪಟ್ಟಿದ್ದಾರೆ. 18 ಮಂದಿಯನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಈ ಪೈಕಿ 16 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಸಿವಿಲ್ ಡಿಫೆಂನ್ಸ್, ರೆಡ್ ಕ್ರೆಸೆಂಟ್, ಭದ್ರತಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here