ಮಾಡಾಳ್‌ ವಿರೂಪಾಕ್ಷಪ್ಪ ಲೋಕಾಯುಕ್ತ ಕಸ್ಟಡಿಯಲ್ಲಿ

ಮಂಗಳೂರು: ಕೆ ಎಸ್ ಡಿಎಲ್ ಲಂಚ ಪ್ರಕರಣದ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತುಮಕೂರು ಕ್ಯಾತಸಂದ್ರ ಟೋಲ್ ಬಳಿ ಬಂಧಿಸಿದ್ದಾರೆ.

ಇನ್ನೋವಾ ಕಾರೊಂದರಲ್ಲಿ ಬರುತ್ತಿದ್ದ ವಿರೂಪಾಕ್ಷಪ್ಪ ಅವರನ್ನು ಟೋಲ್ ಬಳಿ ಅಡ್ಡಗಟ್ಟಿದ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಾಡಳ್ ಕ್ಯಾಮರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರಾದರೂ ಸಫಲರಾಗಲಿಲ್ಲ. ಬಂಧನದ ಬಳಿಕ ಅವರನ್ನು ಬೆಂಗಳೂರಿಗೆ ಕರೆತಂದು ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ನನಗೆ ಎದೆನೋವು, ನಾನು ಹಾರ್ಟ್ ಪೇಶಂಟ್ ಎಂದು ವರಾತ ತೆಗೆದ ಮಾಡಾಳ್ ಗೆ ವೈದ್ಯಕೀಯ ತಪಾಸಣೆ ಬಳಿಕ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದು ಬಂತು. ಸದ್ಯ ಮಾಡಾಳ್ ಲೋಕಾಯುಕ್ತ ಕಷ್ಟಡಿಯಲ್ಲಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here