ಬಿಜೆಪಿಗೆ ಆತ್ಮಾವಲೋಕನ ಅಗತ್ಯ – ಅನಂತ್‌ ಪುತ್ರಿ ವಿಜೇತಾ

ಮಂಗಳೂರು: ರಾಜ್ಯ ರಾಜಧಾನಿಯ ಪ್ರಮುಖ ರಸ್ತೆಗಳಿಗೆ ನಟರ ಹೆಸರುಗಳನ್ನು ಮರುನಾಮಕರಣ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್‌ ಕುಮಾರ್‌ ಪುತ್ರಿ ವಿಜೇತಾ ಅನಂತ್‌ ಕುಮಾರ್‌ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ತನ್ನ ಕೊನೆ ಉಸಿರುವವರೆಗೆ ಪಕ್ಷವನ್ನು ಕಟ್ಟಿ ಬೆಳೆಸಿದ ನನ್ನ ಅಪ್ಪನನ್ನು ಮರೆತಿರುವ ಬಿಜೆಪಿಗೆ ಆತ್ಮಾವಲೋಕನ ಅಗತ್ಯ ಎಂದು ವಿಜೇತಾ ಬಿಜೆಪಿಯನ್ನು ಟೀಕಿಸಿದ್ದಾರೆ.

“ಅಪ್ಪ 1987ರಲ್ಲಿ ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು, ತಮ್ಮ ಕೊನೆಯ ಉಸಿರು ಇರುವವರೆಗೂ ಬಿಜೆಪಿಗಾಗಿ ದುಡಿದರು. ಉದ್ಘಾಟನಾ ಕಾರ್ಯಕ್ರಮಗಳು, ರಸ್ತೆಗಳು, ರೈಲು ಮಾರ್ಗಗಳಲ್ಲಿ ಅವರ ಹೆಸರಿಡುವ ಮೂಲಕ ಅವರ ಕೊಡುಗೆಗಳನ್ನು ಗುರುತಿಸದಿರುವುದು ಕ್ಷುಲ್ಲಕ ನಡೆಯಾಗಿದೆ. ಅವರು ಲಕ್ಷಾಂತರ ಜನರ ಹೃದಯದಲ್ಲಿ ಜೀವಂತವಾಗಿದ್ದಾರೆ. ಅವರನ್ನು ಮರೆಯುತ್ತಿರುವ ಪಕ್ಷಕ್ಕೆ ಆತ್ಮಾವಲೋಕನ ಅಗತ್ಯ ಇದೆ” ಎಂದು ವಿಜೇತಾ ಅನಂತಕುಮಾರ್ ಟ್ವೀಟ್‌ ಮಾಡಿದ್ದಾರೆ.

 

LEAVE A REPLY

Please enter your comment!
Please enter your name here