ಬೇಲೂರ ಗುಡಿಯಲ್ಲಿ ……. ಕೇಶವನೆದುರಲ್ಲಿ…..

ಮಂಗಳೂರು: ಬೇಲೂರಿನ  ಶ್ರೀ ಚನ್ನಕೇಶವ ದೇವಾಲಯ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವ ಸಂಪ್ರದಾಯಕ್ಕೆ ಸಂಬಂಧಪಟ್ಟಂತೆ ಪರ- ವಿರೋಧ ವ್ಯಕ್ತವಾದ ಘಟನೆ ನಡೆದಿದೆ. ಕುರಾನ್ ಪಠಣ ಮಾಡಬಾರದು ಎಂದು ಸಂಘಪರಿವಾರ ಕಾರ್ಯಕರ್ತರು ಪತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕನೋರ್ವ ಕುರಾನ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. 

ಬೇಲೂರಿನಲ್ಲಿ ಏಪ್ರಿಲ್ 4 ರಂದು ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಕುರ್’ಆನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು  ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಜಾಗೃತಿ ಸಮಿತಿ ಪ್ರಮುಖ ಸಂತೋಷ್ ಕೆಂಚಾಂಭ ನೇತೃತ್ವದಲ್ಲಿ ಪ್ರತಿಭಟನೆ ಪಟ್ಟಣದ ಪ್ರಮುಖ ಬೀದಿಯಲ್ಲಿ  ನಡೆಯುತ್ತಿದ್ದು ಪ್ರತಿಭಟನೆ ಯಲ್ಲಿ ಕುರಾನಿಗೆ ಸಂಬಂಧಿಸಿದಂತೆ ಬಜರಂಗದಳದ ಮುಖಂಡರೊಬ್ಬ ಮಾತನಾಡುತ್ತಿದ್ದರು. ಇದೇ ವೇಳೆ ದಾರಿಯಲ್ಲಿ ಸಾಗುತ್ತಿದ್ದ ಯುವಕನೋರ್ವ ಕುರ್’ಆನ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ‌.  ಇದರಿಂದಾಗಿ ಸಂಘಪರಿವಾರ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ.ಇದು ಕೆಲಕಾಲ ಬಿಗುವಿನ ವಾತಾವರಣ ಮತ್ತು ವಾಗ್ವಾದಕ್ಕೆ ಕಾರಣವಾಯಿತು. ಲಾಠಿಚಾರ್ಜ್ ಮಾಡುವ ಮೂಲಕ ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ಘೋಷಣೆ ಕೂಗಿದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. 

ಇದೇ ವೇಳೆ ಸಂಘಪರಿವಾರದ ಕಾರ್ಯಕರ್ತರ ಧೋರಣೆ ವಿರುದ್ಧ ವಿವಿಧ ಸಂಘಟನೆಯ ಪ್ರಮುಖರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಮಾ.30ರಂದು ಗುರುವಾರ ಸೌಹಾರ್ದ ಕಾಲ್ನಡಿಗೆ ನಡೆಸಲು ಮುಂದಾಗಿವೆ. ಸ್ವಾತಂತ್ರ್ಯ ಪೂರ್ವದಿಂದಲೂ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಕಡೆಗಣಿಸಿ ವಿರೋಧಿಸುತ್ತಿರುವುದನ್ನು ಖಂಡಿಸಿದರು. ಗುರುವಾರ ಸೌಹಾರ್ದ ಕಾಲು ನಡಿಗೆ ಜಾಥಾವನ್ನು ನಡೆಸಲು ತೀರ್ಮಾನಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here