ಸುಟ್ಟು ಕರಕಲಾದ ಕಾರಿನಲ್ಲಿ ಶವ ಪತ್ತೆ

ಮಂಗಳೂರು: ಬೆಂಗಳೂರಿನ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. 

ರಾತ್ರಿ ಸುಮಾರು 2:30ರ ವೇಳೆಗೆ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ  ತಗುಲಿದ್ದು, ಸುತ್ತಮುತ್ತ ಕಾರ್‌ಗಳಿಗೆ ಬೆಂಕಿ ತಗಲಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಅಗ್ನಿಶಾಮಕದಳಕ್ಕೆ ಕರೆ ಮಾಡಿ, ಅಗ್ನಿಶಾಮಕದವರು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆನ್ನಲಾಗಿದೆ. ಬೆಂಕಿ ತಗುಲಿದ ಪರಿಣಾಮ ಒಂದು ಕಾರು ಸುಟ್ಟು ಕರಕಲಾಗಿದ್ದು, ಕಾರಿನಲ್ಲಿ ವ್ಯಕ್ತಿಯ ಶವ ಇರುವುದು ಕಂಡುಬಂದಿದೆ. ಕಾರಿನಲ್ಲಿ ಅಪರಿಚಿತ ವ್ಯಕ್ತಿ ರಾತ್ರಿ ಮಲಗಿದ್ದು ಕಾರಿಗೆ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರು ಅರೆಬರೆ ಸುಟ್ಟಿದ್ದು, ವ್ಯಕ್ತಿ ಸಜೀವ ದಹನವಾಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

LEAVE A REPLY

Please enter your comment!
Please enter your name here