ಜೋಡಿಯನ್ನು ತಡೆದು ಲೂಟಿ – ಆರೋಪಿಗಳ ಬಂಧನ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ  ತಡೆದು ಐ-ಫೋನ್ ಮತ್ತು ಬೈಕ್ ದೋಚಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ ಅಲಿಯಾಸ್ ಶಾಕೀರ್ (27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಉಬೈದುಲ್ಲಾ ಅಲಿಯಾಸ್ ಉಬ್ಬಿ(33), ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.

ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಮಾ.27ರಂದು ಬೆಳಿಗ್ಗೆ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದ  ಮೂರು ಮಂದಿಯ ತಂಡವೊಂದು ಅವರ ಕೈಯಲ್ಲಿದ್ದ ಐ-ಫೋನ್ ಕಿತ್ತುಕೊಂಡು ಬೈಕನೊಂದಿಗೆ  ಪರಾರಿಯಾಗಿದ್ದರು. ಈ ಕುರಿತು ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 2 ಸ್ಕೂಟರ್, ಐಫೋನ್ ಮತ್ತು ಬೈಕನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

LEAVE A REPLY

Please enter your comment!
Please enter your name here