ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ – ಮಹಿಳೆ ಸಾವು

ಮಂಗಳೂರು : ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ಬಳಿ ನಡೆದಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಸ್ಸಿನಡಿಗೆ ಬಿದ್ದು ಮಹಿಳೆ ಮೃತಪಟ್ಟ ಬಳಿಕ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ನ್ಯಾಯಕ್ಕಾಗಿ ಒತ್ತಾಯಿಸಿ, ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಮಾಜಿ ಶಾಸಕ ಮೊಯ್ದಿನ್ ಬಾವಾ, ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ ಸ್ಥಳಕ್ಕೆ ಧಾವಿಸಿ ಆಕ್ರೋಶಿತ ಜನರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here