ಹೆಜ್ಜೇನು ದಾಳಿ – ಮೂವರು ಅಸ್ವಸ್ಥ- ಒರ್ವ ಗಂಭೀರ

ಮಂಗಳೂರು: ಹೆಜ್ಜೇನು ದಾಳಿಗೊಳಗಾಗಿ ಮೂವರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ನರಿಂಗಾನ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79), ಅವರ ಪುತ್ರ ರಾಯಲ್ ಕುಟಿನ್ಹ(39)ರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ರಾಬರ್ಟ್ ಕುಟಿನ್ಹ ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುತ್ತಿದ್ದಂತೆ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿವೆ. ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಮೇಲೂ ದಾಳಿ ಮಾಡಿದೆ. ಮಗನ‌ ಸಹಾಯದಿಂದ ಮಹಡಿಯಿಂದ ಇಳಿದು ಪಾರಾದರೂ ಇಬ್ಬರು ಹೆಜ್ಜೇನು ದಾಳಿಗೆ ಗುರಿಯಾಗಿದ್ದಾರೆ. 

LEAVE A REPLY

Please enter your comment!
Please enter your name here